ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಕಾಂಗ್ರೆಸ್ ಪಕ್ಷದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಚುನಾವಣೆ ಪ್ರಚಾರ ಮಾಡಿ ಮತಯಾಚನೆ ನಡೆಸುತ್ತಿದ್ದರೆ,
ಮತ್ತೊಂದು ಕಡೆ ನಾನು ಯಾರಿಗೂ ಕಮ್ಮಿ ಇಲ್ಲ ಎನ್ನುವಂತೆ ಹಿರಿಯ ನಿವೃತ್ತ ಐಎಎಸ್ ಅಧಿಕಾರಿ ಶಂಭು ಕಲ್ಲೋಳಿಕರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುಖಾಂತರ ಭರ್ಜರಿ ಮತ ಬೇಟೆ ಆಡುತ್ತಾ ರಾಷ್ಟ್ರೀಯ ಪಕ್ಷಗಳಿಗೆ ನಡುಕ ಹುಟ್ಟಿಸುತ್ತಿದ್ದಾರೆ.
ಆದರೆ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೇ ಸೋಲಿನ ಭೀತಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.
ಚಿಕ್ಕೋಡಿ ಬಿಜೆಪಿ ಲೋಕಸಭೆ ಟಿಕೆಟ್ ಪ್ರಭಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ ರಮೇಶ್ ಕತ್ತಿ ಅವರು ಯಾವುದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬರುತ್ತಿಲ್ಲ.
ಟಿಕೆಟ್ ಕೈ ತಪ್ಪಿದರಿಂದ ಮುನಿಸಿ ಕೊಂಡ ಕತ್ತಿ ಚುಣಾವಣಾ ಪ್ರಚಾರದಿಂದ ದೂರ ಉಳಿದಿದ್ದು ಬಿಜೆಪಿ ಹೈ ಕಮಾಂಡ್ ರಮೇಶ್ ಕತ್ತಿ ಅವರನ್ನ ಮನವೊಲಿಸಲು ವಿಪಲವಾಯ್ತಾ ಎಂಬ ಪ್ರಶ್ನೆ ಸಹ ಇದೀಗ ಉದ್ಭವಿಸುತ್ತಿದೆ.
ಇನ್ನು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಒಟ್ಟು 8 ವಿಧಾನಸಭಾ ಮತಕ್ಷೇತ್ರಗಳು ಬರುತ್ತವೆ. ಅದರಲ್ಲಿ 5 ಮತಕ್ಷೇತ್ರದಲ್ಲಿ ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಪತಾಕೆ ಹಾರಿಸಿದೆ.
ಇದನ್ನು ಭೇದಿಸಲು ಬಿಜೆಪಿ ಯಾವುದೇ ರೀತಿಯಲ್ಲಿ ಪ್ರಯತ್ನ ಮಾಡುತಿಲ್ಲ ಕೇವಲ ಮೋದಿಯನ್ನ ಬಂಡವಾಳ ಇಟ್ಟುಕೊಂಡು ಮತಯಾಚನೆ ಮಾಡುತ್ತಿರುವ ಜೋಲ್ಲೆಗೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡ್ತಾರಾ ಅಥವಾ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಕೈ ಹಿಡಿಯುತ್ತಾರಾ,
ಅಥವಾ ಎರಡು ರಾಷ್ಟ್ರೀಯ ಪಕ್ಷಗಳನ್ನು ಧಿಕ್ಕರಿಸಿ ರಾಯಬಾಗ ವಿಧಾನಸಭಾ ಚುನಾವಣೆಯಲ್ಲಿ ಕುತಂತ್ರದಿಂದ ಜಯದ ಅಂಚಿನಲ್ಲಿ ಸೋಲು ಕಂಡಿದ್ದ ಪಕ್ಷೇತರ ಅಭ್ಯರ್ಥಿ ಶಂಭು ಕಲೋಳಿಕರಗೆ ಜೈ ಅನ್ನುತ್ತಾರಾ ಸದ್ಯಕ್ಕೆ ಕೂತೂಹಲ ಮೂಡಿಸಿದೆ.